ಅಶೋಕ ವೃಕ್ಷ
೧) ಸ್ತ್ರೀಯರ ಮಾಸಿಕ ಅತಿಸ್ರಾವ ಹತೋಟಿಗೆ:
೨೦ ಗ್ರಾಂ ಅಶೋಕ ಮರದ ಚಕ್ಕೆಯನ್ನು ಚೆನ್ನಾಗಿ ಜಜ್ಜಿ ೨೫೦ ಮಿಲೀ ಹಾಲಿನಲ್ಲಿ ಹಾಕಿ ಕಷಾಯ ಮಾಡುವುದು. ತಣ್ಣಗಾದ ಮೇಲೆ ಕಷಾಯವನ್ನು ಶೋಧಿಸಿ ಕೆಂಪು ಕಲ್ಲುಸಕ್ಕರೆ ಪುಡಿ ಸೇರಿಸಿ ಹೊತ್ತಿಗೆ ನಾಲ್ಕು ಟೀ ಚಮಚ ಸೇವಿಸಬೇಕು.
೨೦ ಗ್ರಾಂ ಅಶೋಕ ಮರದ ಚಕ್ಕೆಯನ್ನು ಚೆನ್ನಾಗಿ ಜಜ್ಜಿ ೨೫೦ ಮಿಲೀ ಹಾಲಿನಲ್ಲಿ ಹಾಕಿ ಕಷಾಯ ಮಾಡುವುದು. ತಣ್ಣಗಾದ ಮೇಲೆ ಕಷಾಯವನ್ನು ಶೋಧಿಸಿ ಕೆಂಪು ಕಲ್ಲುಸಕ್ಕರೆ ಪುಡಿ ಸೇರಿಸಿ ಹೊತ್ತಿಗೆ ನಾಲ್ಕು ಟೀ ಚಮಚ ಸೇವಿಸಬೇಕು.
೨) ಸಂತಾನ ಪ್ರಾಪ್ತಿಗೆ:
ಸ್ತ್ರೀಯರ ಋತುಚಕ್ರ ಸರಿಯಿದ್ದು ಅಶೋಕ ಮರದ ಎಲೆಗಳನ್ನು ಒಂದು ವಾರ ಸೇವಿಸಿದರೆ ಸಂತಾನ ಭಾಗ್ಯ ಲಭಿಸುವುದು.
ಸ್ತ್ರೀಯರ ಋತುಚಕ್ರ ಸರಿಯಿದ್ದು ಅಶೋಕ ಮರದ ಎಲೆಗಳನ್ನು ಒಂದು ವಾರ ಸೇವಿಸಿದರೆ ಸಂತಾನ ಭಾಗ್ಯ ಲಭಿಸುವುದು.
೩) ಮುಟ್ಟಿನ ಶೂಲೆ ಮತ್ತು ಗರ್ಭಸ್ರಾವ ತಡೆಗೆ:
ಗ್ರಾಂ ಅತಿಮಧುರ,೨೦ ಗ್ರಾಂ ಅಶೋಕ ಮರದ ಚಕ್ಕೆಯನ್ನು ನುಣ್ಣಗೆ ಚೂರ್ಣ ಮಾಡಿ ಎರಡು ಲೋಟ ನೀರು ಹಾಕಿ ಕಾಯಿಸಿ ಕಾಲು ಭಾಗ ಉಳಿಯುವಂತೆ ಕಷಾಯ ಮಾಡುವುದು. ತಣ್ಣಗಾದ ಮೇಲೆ ಈ ಕಷಾಯಕ್ಕೆ ಸ್ವಲ್ಪ ಕಲ್ಲುಸಕ್ಕರೆ ಸೇರಿಸಿ ದಿವಸಕ್ಕೆ ೨ ಬಾರಿ ೨ ಟೀ ಚಮಚ ಸೇವಿಸುವುದರಿಂದ ಸಮಸ್ಯೆ ಹತೋಟಿಗೆ ಬರುತ್ತದೆ.
ಗ್ರಾಂ ಅತಿಮಧುರ,೨೦ ಗ್ರಾಂ ಅಶೋಕ ಮರದ ಚಕ್ಕೆಯನ್ನು ನುಣ್ಣಗೆ ಚೂರ್ಣ ಮಾಡಿ ಎರಡು ಲೋಟ ನೀರು ಹಾಕಿ ಕಾಯಿಸಿ ಕಾಲು ಭಾಗ ಉಳಿಯುವಂತೆ ಕಷಾಯ ಮಾಡುವುದು. ತಣ್ಣಗಾದ ಮೇಲೆ ಈ ಕಷಾಯಕ್ಕೆ ಸ್ವಲ್ಪ ಕಲ್ಲುಸಕ್ಕರೆ ಸೇರಿಸಿ ದಿವಸಕ್ಕೆ ೨ ಬಾರಿ ೨ ಟೀ ಚಮಚ ಸೇವಿಸುವುದರಿಂದ ಸಮಸ್ಯೆ ಹತೋಟಿಗೆ ಬರುತ್ತದೆ.
೪) ಬಿಳಿಸ್ರಾವಕ್ಕೆ:
-೧೦ ಗ್ರಾಂ ಅಶೋಕ ಚಕ್ಕೆಯನ್ನು ಚೆನ್ನಾಗಿ ಜಜ್ಜಿ ಒಂದು ಬಟ್ಟಲು ನೀರು ಸೇರಿಸಿ ಕಷಾಯ ಮಾಡಿ ಅದಕ್ಕೆ ಸ್ವಲ್ಪ ಬೆಲ್ಲ ಬೆರೆಸಿ ದಿನಕ್ಕೆರಡು ಬಾರಿ ಸೇವಿಸಬೇಕು.
– ಅತಿಮಧುರ ಚೂರ್ಣ, ಬೂದುಗುಂಬಳದ ಬೇರಿನ ಚೂರ್ಣ,ಅಶ್ವಗಂಧಿ ಚೂರ್ಣ ಮತ್ತು ಉದ್ದಿನ ಹಿಟ್ಟು ಸಮಪ್ರಮಾಣದಲ್ಲಿ ತೆಗೆದುಕೊಂಡು ಮಿಶ್ರ ಮಾಡಿ, ೫ ಗ್ರಾಂ ಚೂರ್ಣವನ್ನು ಕಲ್ಲುಸಕ್ಕರೆ ಪುಡಿ ಸೇರಿಸಿದ ಹಾಲಿನಲ್ಲಿ ದಿವಸಕ್ಕೆ ಎರಡು ಬಾರಿ ತೆಗೆದುಕೊಂಡಲ್ಲಿ ಶ್ವೇತ ಪದರ ಹತೋಟಿಗೆ ಬರುತ್ತದೆ.
-೧೦ ಗ್ರಾಂ ಅಶೋಕ ಚಕ್ಕೆಯನ್ನು ಚೆನ್ನಾಗಿ ಜಜ್ಜಿ ಒಂದು ಬಟ್ಟಲು ನೀರು ಸೇರಿಸಿ ಕಷಾಯ ಮಾಡಿ ಅದಕ್ಕೆ ಸ್ವಲ್ಪ ಬೆಲ್ಲ ಬೆರೆಸಿ ದಿನಕ್ಕೆರಡು ಬಾರಿ ಸೇವಿಸಬೇಕು.
– ಅತಿಮಧುರ ಚೂರ್ಣ, ಬೂದುಗುಂಬಳದ ಬೇರಿನ ಚೂರ್ಣ,ಅಶ್ವಗಂಧಿ ಚೂರ್ಣ ಮತ್ತು ಉದ್ದಿನ ಹಿಟ್ಟು ಸಮಪ್ರಮಾಣದಲ್ಲಿ ತೆಗೆದುಕೊಂಡು ಮಿಶ್ರ ಮಾಡಿ, ೫ ಗ್ರಾಂ ಚೂರ್ಣವನ್ನು ಕಲ್ಲುಸಕ್ಕರೆ ಪುಡಿ ಸೇರಿಸಿದ ಹಾಲಿನಲ್ಲಿ ದಿವಸಕ್ಕೆ ಎರಡು ಬಾರಿ ತೆಗೆದುಕೊಂಡಲ್ಲಿ ಶ್ವೇತ ಪದರ ಹತೋಟಿಗೆ ಬರುತ್ತದೆ.
೫) ರಕ್ತ ಪಿತ್ತದ ನಿವಾರಣೆಗೆ:
ಅರ್ಧ ಟೀ ಚಮಚ ನುಣ್ಣಗಿರುವ ಜೀರಿಗೆ ಪುಡಿ ಮತ್ತು ಒಂದು ಟೀ ಚಮಚ ಅಶೋಕ ಚಕ್ಕೆಯ ಚೂರ್ಣಕ್ಕೆ ಸ್ವಲ್ಪ ಕಲ್ಲುಸಕ್ಕರೆ ಪುಡಿ ಸೇರಿಸಿ ನೀರಿನೊಂದಿಗೆ ಸೇವಿಸಿದರೆ ಪರಿಹಾರ ದೊರಕುವುದು.
ಅರ್ಧ ಟೀ ಚಮಚ ನುಣ್ಣಗಿರುವ ಜೀರಿಗೆ ಪುಡಿ ಮತ್ತು ಒಂದು ಟೀ ಚಮಚ ಅಶೋಕ ಚಕ್ಕೆಯ ಚೂರ್ಣಕ್ಕೆ ಸ್ವಲ್ಪ ಕಲ್ಲುಸಕ್ಕರೆ ಪುಡಿ ಸೇರಿಸಿ ನೀರಿನೊಂದಿಗೆ ಸೇವಿಸಿದರೆ ಪರಿಹಾರ ದೊರಕುವುದು.
ಕೃಪೆ : ಸಸ್ಯ ಕಣಜ
ಸೂಚನೆ : ಈ
ಲೇಖನ ಸದಸ್ಯರ ಮಾಹಿತಿಗಾಗಿ ಮಾತ್ರ. ನಾನು ಆಯುರ್ವೇದ ವೈದ್ಯ ಅಲ್ಲ. ಔಷಧವಾಗಿ ಉಪಯೋಗಿಸಬಯಸುವವರು
ತಪ್ಪದೇ ಹೆಚ್ಚಿಗೆ ತಿಳಿದವರ ಹಾಗೂ ವೈದ್ಯರ ಸಲಹೆ ಪಡೆಯಿರಿ.
No comments:
Post a Comment